ಬೆಂಗಳೂರು: ಕೆಫೆ ಕಾಫಿ ಡೇ ಮಾಲಿಕ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ ಸಿದ್ದಾರ್ಥ ಅವರ ಮನೆಯಲ್ಲಿ ಶುಕ್ರವಾರವೂ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.
ಬೆಂಗಳೂರು, ಚೆನ್ನೈ, ಮುಂಬೈ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಶೋಧ ಮುಂದುವರಿದಿದ್ದೂ ಶನಿವಾರ ಸಂಜೆಯೊಳಗೆ ಪರಿಶೀಲನೆ ಅಂತ್ಯವಾಗುವ ಸಾಧ್ಯತೆಯಿದೆ, ವಿಠಲ ಮಲ್ಯ ರಸ್ತೆಯಲ್ಲಿರುವ ಕೆಫೆ ಕಾಫೀ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಹಲವು ದಾಖಲಾತಿಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಸದಾಶಿವನಗರದಲ್ಲಿರುವ ಸಿದ್ದಾರ್ಥ ಮನೆ, ಚಿಕ್ಕಮಗಳೂರಿನಲ್ಲಿರುವ ಕಾಫಿ ಎಸ್ಟೇಟ್, ಮತ್ತು ಕ್ಯೂರಿಂಗ್ ಪ್ಲಾಂಟ್ ಗಳ ಮೇಲೂ ದಾಳಿ ನಡೆಸಲಾಗಿದೆ.
ದಾಳಿಯ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಿದ್ದಾರ್ಥ ಅವರ ಹೇಳಿಕೆ ದಾಖಲಿಸಿಕೊಂಡು ಪಂಚನಾಮೆ ಮುಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.