ಸಿದ್ದಾರ್ಥ
ಸಿದ್ದಾರ್ಥ

ಎಸ್ ಎಂ ಕೆ ಅಳಿಯ ಸಿದ್ದಾರ್ಥ ಮನೆಯಲ್ಲಿ ಎರಡನೇ ದಿನವೂ ಮುಂದುವರೆದ ಐಟಿ ಶೋಧ

ಕೆಫೆ ಕಾಫಿ ಡೇ ಮಾಲಿಕ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ ಸಿದ್ದಾರ್ಥ ಅವರ ಮನೆಯಲ್ಲಿ ಶುಕ್ರವಾರವೂ ಐಟಿ ಅಧಿಕಾರಿಗಳು ಪರಿಶೀಲನೆ ...
Published on
ಬೆಂಗಳೂರು: ಕೆಫೆ ಕಾಫಿ ಡೇ ಮಾಲಿಕ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ ಸಿದ್ದಾರ್ಥ ಅವರ ಮನೆಯಲ್ಲಿ  ಶುಕ್ರವಾರವೂ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. 
ಬೆಂಗಳೂರು, ಚೆನ್ನೈ, ಮುಂಬೈ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಶೋಧ ಮುಂದುವರಿದಿದ್ದೂ ಶನಿವಾರ ಸಂಜೆಯೊಳಗೆ ಪರಿಶೀಲನೆ ಅಂತ್ಯವಾಗುವ ಸಾಧ್ಯತೆಯಿದೆ, ವಿಠಲ ಮಲ್ಯ ರಸ್ತೆಯಲ್ಲಿರುವ ಕೆಫೆ ಕಾಫೀ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಹಲವು ದಾಖಲಾತಿಗಳನ್ನು ವಶ ಪಡಿಸಿಕೊಳ್ಳಲಾಗಿದೆ. 
ಸದಾಶಿವನಗರದಲ್ಲಿರುವ ಸಿದ್ದಾರ್ಥ ಮನೆ, ಚಿಕ್ಕಮಗಳೂರಿನಲ್ಲಿರುವ ಕಾಫಿ ಎಸ್ಟೇಟ್, ಮತ್ತು ಕ್ಯೂರಿಂಗ್ ಪ್ಲಾಂಟ್ ಗಳ ಮೇಲೂ ದಾಳಿ ನಡೆಸಲಾಗಿದೆ.
ದಾಳಿಯ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಿದ್ದಾರ್ಥ ಅವರ ಹೇಳಿಕೆ ದಾಖಲಿಸಿಕೊಂಡು ಪಂಚನಾಮೆ ಮುಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com