ವಿದ್ಯಾರ್ಥಿ ಬೇರೆ ಮಕ್ಕಳ ಜೊತೆ ಜಗಳ ಮಾಡಿದ್ದ ಎಂದು ಶಿಕ್ಷಕ ಅಶೋಕ್ ಗೆ ಹೊಡೆದಿದ್ದರು. ತೀವ್ರವಾಗಿ ಬೆನ್ನಿಗೆ ಏಟು ಬಿದ್ದಿದ್ದರಿಂದ ವಿದ್ಯಾರ್ಥಿ ಗಾಯಗೊಂಡಿದ್ದ. ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಂತೆ. ಬಾಲಕನ ಮೇಲೆ ಹಲ್ಲೆಯಾಗಿದ್ದಕ್ಕೆ ವೈದ್ಯಕೀಯ ವರದಿ ನೀಡುವಂತೆ ಕೇಳಿದ್ದರು. ಇದರಿಂದ ಎಫ್ ಐಆರ್ ದಾಖಲಿಸಿಕೊಳ್ಳಲು ತಡವಾಯಿತು ಎಂದು ಪಾಶಾ ಹೇಳುತ್ತಾರೆ.