ಸೆಪ್ಟೆಂಬರ್.20ರಂದು ಗ್ರಾಮಕ್ಕೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿದ್ದ ಸಂದರ್ಭದಲ್ಲಿ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಗೌಡ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಕೈಕುರೆ ಮತ್ತು ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿಪಿ ವರ್ಗೆಶ್ ಅವರು ಮನವಿ ಪತ್ರವೊಂದನ್ನು ನೀಡಿದ್ದರು. ಪತ್ರದಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಮದ್ಯದಂಗಡಿ ನಡೆಸಲಾಗುತ್ತಿದ್ದು, ಕೂಡಲೇ ಮದ್ಯದಂಗಡಿ ಮುಚ್ಚುವಂತೆ ಮನವಿ ಮಾಡಿಕೊಂಡಿದ್ದರು.