ದಾಳಿ ಬಳಿಕ ಭಾನುವಾರ ಹೇಳಿಕೆಯನ್ನು ಬಿಡುಗೆಡ ಮಾಡಿದ್ದ ಆದಾಯ ತೆರಿಗೆ ಇಲಾಖೆ, ಸಿದ್ಧಾರ್ಥ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ನಡೆಸಲಾದ ದಾಳಿಯಲ್ಲಿ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತೆರಿಗೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸಿದ್ಧಾರ್ಥ್ ಅವರು ಐಟಿ ಕಾನೂನು ಗಳನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಿತ್ತು.