ರ‍್ಯಾಲಿಯಿಂದ ನದಿಗಳ ಪುನರುಜ್ಜೀವನ ಸಾಧ್ಯವಿಲ್ಲ: ರಾಜೇಂದ್ರ ಸಿಂಗ್

ನದಿಗಳ ಬಗ್ಗೆ ಜ್ಞಾನವಿಲ್ಲದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಅದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಡಾ.ರಾಜೇಂದ್ರ ಸಿಂಗ್
ಡಾ.ರಾಜೇಂದ್ರ ಸಿಂಗ್
ಚಿತ್ರದುರ್ಗ: ನದಿಗಳ ಪುನರುಜ್ಜೀವನಕ್ಕಾಗಿ ಈಶಾ ಫೌಂಡೇಶನ್ ನ ಸದ್ಗುರು ಜಗದೀಶ್ ವಾಸುದೇವ್ ಅವರು ಪ್ರಾರಂಭಿಸಿರುವ ರ‍್ಯಾಲಿಯ ಬಗ್ಗೆ ಮ್ಯಾಗ್ಸೆಸೆ ಪ್ರಶಸ್ತಿ ಪಡೆದಿರುವ, ಜಲಸಂರಕ್ಷಕ ಡಾ. ರಾಜೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ನದಿಗಳ ಬಗ್ಗೆ ಜ್ಞಾನವಿಲ್ಲದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಅದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಹಣ ಇರುವವರು ಈ ರ‍್ಯಾಲಿಗೆ ಬೆಂಬಲ ಸೂಚಿಸುತ್ತಿದ್ದಾರೆ, ಆದರೆ ಇದರಿಂದ ನದಿಗಳಾ ಪುನರುಜ್ಜೀವನ ಸಾಧ್ಯವಾಗುವುದಿಲ್ಲ. ಒಂದು ವೇಳೆ ನದಿಗಳ ಪುನರುಜ್ಜೀವನದ ಬಗ್ಗೆ ಗಂಭೀರವಾಗಿ ಯೋಚಿಸುವುದಾದರೆ ರಿವರ್ ಕಾಂಗ್ರೆಸ್ ನ್ನು ಹಮ್ಮಿಕೊಳ್ಳಿ 35 ವರ್ಷಗಳ ಹಿಂದೆ ಇದೇ ರೀತಿಯ ಪ್ರಯತ್ನ 8 ನದಿಗಳ ಪುನರುಜ್ಜೀವನಕ್ಕೆ ಸಹಕಾರಿಯಾಗಿತ್ತು ಎಂದು ರಾಜೇಂದ್ರ ಸಿಂಗ್ ಸಲಹೆ ನೀಡಿದ್ದಾರೆ. 
ಇದೇ ವೇಳೆ ಸರ್ಕಾರಕ್ಕೆ ನದಿ ಗಣಿಗಾರಿಕೆ ಮಾಡಲು ಸರ್ಕಾರ ಕಡಿವಾಣ ಹಾಕಬೇಕು ಎಂದು ಡಾ.ರಾಜೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com