ಬೆಂಗಳೂರು ಮೂಲದ ಉದ್ಯಮಿ ಬಾಲಾಜಿ ನಾರಾಯಣ್ ಮೂರ್ತಿ ಮೊನ್ನೆ ಸಾಯಂಕಾಲ 5.40ರ ಸುಮಾರಿಗೆ ಮುಂಬೈಗೆ ವಿಮಾನದಲ್ಲಿ ತೆರಳಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಮಳೆಯಿಂದಾಗಿ ಬರುವುದು ತಡವಾಗಿತ್ತು. ಇನ್ನೂ ಕೆಲ ಪ್ರಯಾಣಿಕರು ಕೂಡ ಬರುವುದು ತಡವಾಗಿತ್ತು. ಬೇರೆ ವಿಮಾನದಲ್ಲಿ ತೆರಳಲು ವ್ಯವಸ್ಥೆ ಮಾಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದರು. ಆಗ ಬಾಲಾಜಿ ಮೂರ್ತಿ ಸಹ ಪ್ರಯಾಣಿಕರೊಬ್ಬರಲ್ಲಿ ಕನ್ನಡದಲ್ಲಿ ಮಾತನಾಡಲು ಆರಂಭಿಸಿದಾಗ ಗೊಏರ್ ಸಿಬ್ಬಂದಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ಹೇಳಿದರು.