ಈ ಬಾರಿ ದಸರಾ ಜಂಬೂ ಮೆರವಣಿಗೆ ಗುಣಮಟ್ಟ ಹೆಚ್ಚಿಸಲು ಸ್ಥಬ್ದಚಿತ್ರಗಳ ಸಂಖ್ಯೆಯನ್ನು 40ಕ್ಕೆ ಮಿತಿಗೊಳಿಸಲಾಗಿದೆ. ಈ ಸ್ಥಬ್ದಚಿತ್ರಗಳು ಮೈಸೂರಿನ ಹಿಂದಿನ ರಾಜರ ಆಳ್ವಿಕೆ, ಕನ್ನಡ ನಾಡಿಗೆ ಅವರ ಕೊಡುಗೆ, ನೀರಿನ ಸಂರಕ್ಷಣೆ ಮತ್ತು ಇತರ ವಿಷಯಗಳ ಕುರಿತು ಮಹತ್ವ ಸಾರುವ ಚಿತ್ರಗಳಾಗಿವೆ. ರಾಜ್ಯದ 30 ಜಿಲ್ಲೆಗಳ ವಿವಿಧ ನಿಗಮ ಮತ್ತು ಮಂಡಳಿಗಳ ಅಭಿವೃದ್ಧಿ ಕುರಿತು ಸ್ಥಬ್ಧ ಚಿತ್ರಗಳು ತೋರಿಸಲಿವೆ. ಸ್ಥಬ್ಧಚಿತ್ರಗಳ ಹಿಂದೆ ಸಾಂಸ್ಕೃತಿಕ ತಂಡಗಳು, ಜಾನಪಪದ ಕಲಾವಿದರ ಪ್ರದರ್ಶನ, ಪೊಲೀಸ್, ರೈಲ್ವೆ, ಕೆಎಸ್ಆರ್ ಪಿ, ಎನ್ ಸಿಸಿ ಮತ್ತು ಇತರ ಪೊಲೀಸ್ ಬ್ಯಾಂಡ್ ಗಳ ಕವಾಯತು ನಡೆಯಲಿವೆ.