ಇಂದು ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಡಿನ ಜನತೆಗೆ ದಸರಾದ ಶುಭಾಶಯವನ್ನು ಕೋರಿದರು. ಈ ಬಾರಿ ಎಲ್ಲೆಡೆ ಮಳೆಯಾಗಿದೆ. ಹೀಗಾಗಿ ಸಂಭ್ರಮದಿಂದ ದಸರಾ ಆಚರಿಸುತ್ತಿದ್ದೇವೆ. ಮಳೆಯಾಗಿರುವುದರಿಂದ ಕೆರೆಕಟ್ಟೆಗಳು ತುಂಬಿದ್ದು, ಜನರು ದಸರೆಯಲ್ಲಿ ಉತ್ಸಹದಿಂದ ಭಾಗವಹಿಸಿದ್ದಾರೆ ಎಂದರು.