ನಾನು ಭಾರತೀಯನೆಂದು ಅವರಿಗೆ ಹೇಳಿದೆ. ಬಳಿಕ ನನ್ನನ್ನು ಭದ್ರತಾ ಸಿಬ್ಬಂದಿಗಳ ಕೊಠಡಿಯಲ್ಲಿ ಕೂರಿಸಿದರು. ಸ್ಥಳದಲ್ಲಿ ರಕ್ತದ ಕೋಡಿಯೇ ಹರಿದಿತ್ತು. ನನ್ನ ಕಣ್ಣ ಮುಂದೆಯೇ ನಾಲ್ವರ ಹತ್ಯೆ ನಡೆದಿತ್ತು. ಮುಂದಿನ ಸರದಿ ನನ್ನದೇ ಎಂದು ಮನಸ್ಸಿನಲ್ಲಿ ತೀರ್ಮಾನಿಸಿದ್ದೆ. ಆದರೆ, ಅವರು ನನ್ನನ್ನು ಸಾಯಿಸಲಿಲ್ಲ. ನನ್ನ ಕೈ ಕಾಲುಗಳನ್ನು ಕಟ್ಟಿ ವಾಹನವೊಂದರಲ್ಲಿ ಹಾಕಿಕೊಂಡು ಹೋದರು. ಬಳಿಕ ನನ್ನನ್ನು ಮತ್ತೊಂದು ಭಯೋತ್ಪಾದಕ ಗುಂಪಿಗೆ ಹಸ್ತಾಂತರಿಸಿದರು.