2015 ರಲ್ಲಿ ಭಾರತಕ್ಕೆ ಬಂದ ಈತ ಪ್ರಸಿದ್ಧ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ಅನಾರೋಗ್ಯ ಸಮಸ್ಯೆಯಿಂದ ಕೆಲಸ ಬಿಟ್ಟಿದ್ದ ಪ್ರಭು ಕನಕರತ್ನಂ ಸ್ವಂತ ವ್ಯವಹಾರ ಆರಂಭಿಸಿದ್ದ. ನಿರೀಕ್ಷೆಯಂತೆ ಲಾಭ ಬಾರದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿ, ಕಳ್ಳತನಕ್ಕೆ ಕೈ ಹಾಕಿದ್ದ. ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗೆ ತೆರಳುತ್ತಿದ್ದ ಪ್ರಭು, ಚಿನ್ನಾಭರಣ ಖರೀದಿ ನೆಪದಲ್ಲಿ ಹಲವು ಆಭರಣಗಳನ್ನು ತೆಗೆಸಿ, ಸಿಬ್ಬಂದಿ ಕಣ್ತಪ್ಪಿಸಿ 2.5 ಲಕ್ಷ ಮೌಲ್ಯದ 60 ಗ್ರಾಂ. ತೂಕದ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ.