ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!

ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ...
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್
Updated on
ಬೆಂಗಳೂರು; ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ. 
ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ರವಿಚೆನ್ನಣ್ಣನವರ್ ಅವರು, ಬೀದಿ ವ್ಯಾಪಾರಿಗಳನ್ನು ತಮ್ಮ ಕಚೇರಿಗೆ ಕರೆಸಿಕೊಂಡು ನಡೆಸಿದ ಸಭೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರವಿ ಅವರ ಮಾತುಗಳಿಗೆ ಬೆಂಗಳೂರು ಜನತೆ ಮನಸೋತಿದ್ದಾರೆ. 
ಬೀದಿ ಬದಿಯಲ್ಲಿರುವ ವ್ಯಾಪಾರಿಗಳನ್ನು ಕಡೆಗಣನೆಯಿಂದ ನೋಡುತ್ತಿರುವ ಈ ದಿನಗಳಲ್ಲಿ, ರವಿ ಚನ್ನಣ್ಣನವರ್ ಅವರು ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವುದಕ್ಕೆ ಹಲವು ಮೆಚ್ಚುಗೆಗಳು ವ್ಯಕ್ತವಾಗತೊಡಗಿವೆ. 
ವಿಡಿಯೋದಲ್ಲಿರುವ ಪ್ರಕಾರ ಬೀದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿರುವ ರವಿ ಚನ್ನಣ್ಣನವರ್ ಅವರು, ಬೆಂಗಳೂರಿನಲ್ಲಿ ಯಾರೂ ಭಯದಿಂದ ಬದುಕುವ ವಾತಾರವಣ ಇರಬಾರದು. ಈ ಮೆಜೆಸ್ಟಿಕ್ ನಮ್ಮದಲ್ಲ. ಮೆಜೆಸ್ಟಿಕ್ ಇರುವುದು ನಿಮ್ಮಿಂದಲೇ ಹೊರತು, ನಮ್ಮಿಂದಲ್ಲ. ಮೆಜೆಸ್ಟಿಕ್ ನಿಮ್ಮದು ಎಂದು ಬೀದಿ ವ್ಯಾಪಾರಿಗಳಿಗೆ ಹೇಳಿದ್ದಾರೆ. 
ಮೆಜೆಸ್ಟಿಕ್ ಎಂದಾಕ್ಷಣ ಜನರದಲ್ಲಿ ಭಯದ ವಾತಾವರಣ ಇದೆ. ಮೆಜೆಸ್ಟಿಕ್ ನಲ್ಲಿ ಮೋಸವಾಗುತ್ತದೆ, ಪಿಕ್ ಪಾಕೆಟ್ ಆಗುತ್ತದೆ ಎಂದು ಹೇಳಲಾಗುತ್ತಿದೆ. ಇಂತಹ ಘಟನೆಗಳ ಬಗ್ಗೆ ಶೀಘ್ರಗತಿಯಲ್ಲಿ ಮಾಹಿತಿ ನೀಗುವುದು ಇಲ್ಲಿನ ವ್ಯಾಪಾರಿಗಳಿಗೆ. ಕೂಡಲೇ ನಮಗೆ ಮಾಹಿತಿ ಕೊಡಿ, ನಾವು ಕ್ರಮ ಕೈಗೊಳ್ಳುತ್ತೇವೆ. ಮೆಜೆಸ್ಟಿಕ್'ನ್ನು ಉತ್ತಮ ವಾತಾವರಣದ ಪ್ರದೇಶವನ್ನಾಗಿ ನಿರ್ಮಿಸೋಣ, ಇದಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 
ಬಳಿಕ ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವ ಅವರು, ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. 

ಬೀದಿ ವ್ಯಾಪಾರಗಳೇನಿದ್ದರೂ ನಿಮಗೆ ಕೊನೆಯದಾಗಲಿ.ನಿಮ್ಮ ಮಕ್ಕಳಿಗೂ ಅದು ಮುಂದುವರೆಯಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಬೆಂಗಳೂರಿನಲ್ಲಿ ಶಿಕ್ಷಣ ಕೊಡಿಸುವುದು ಕಷ್ಟ. ಮೈಸೂರಿನಲ್ಲಿ ಓದಿಸುವುದಾದರೆ, ಕರೆದುಕೊಂಡು ಬನ್ನಿ, ನಾನು ಶಿಕ್ಷಣ ಕೊಡಿಸುತ್ತೇನೆ. ಹಾಸ್ಟೆಲ್ ನಲ್ಲಿ ಸೇರಿಸಿ ಓದಿಸುವ ಕೆಲಸವನ್ನು ಮಾಡಿಸುತ್ತೇನೆ. ದಾನಿಗಳಿಂದಲೇ ನಡೆಯುತ್ತಿರುವ ಶಾಲೆಯೊಂದರಲ್ಲಿ ನಿಮ್ಮ ಮಕ್ಕಳನ್ನು ಸೇರಿಸುತ್ತೇನೆ. ಹೈಸ್ಕೂಲ್ ನಿಂದ ಹಿಡಿದು, ಪಿಯುಸಿ, ಡಿಗ್ರಿಯವರೆಗೂ ಶಿಕ್ಷಣ ಕೊಡಿಸುತ್ತೇನೆಂದು ಬೀದಿ ವ್ಯಾಪಾರಿಗಳ ಮನಗೆದ್ದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com