ದಾವಣಗೆರೆ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅದೇ ಊರಿನ ಮಂದು ಎಂಬ ಪರಿಚಿತ ಯುವಕ ಆಕೆಯನ್ನು ನಂಬಿಸಿ ಹೊರಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಅಪ್ರಾಪ್ತೆ ಗರ್ಭಿಣಿಯಾಗಿದ್ದು, ಅಪ್ರಾಪ್ತೆಯಾಗಿರುವುದರಿಂದ ಮತ್ತು ಮದುವೆಯಾಗದೇ ಗರ್ಭಿಣಿಯಾಗಿರುವುದರಿಂದ ಸಮಾಜದಲ್ಲಿ ಹಾಗೂ ವೈಯಕ್ತಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಭ್ರೂಣವನ್ನು ತೆಗೆಸಲು ಅನುಮತಿ ನೀಡಬೇಕು ಆಪ್ರಾಪ್ತೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಆ ಅಪ್ರಾಪ್ತೆ ಹಾಗೂ ಪೋಷಕರನ್ನು ತಮ್ಮ ಕೊಠಡಿಗೆ ಕರೆಸಿ, ವಿಚಾರಣೆ ನಡೆಸಿ, ಬಿಎಂಸಿಯಿಂದ ವೈದ್ಯ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ ಬಳಿಕ ಈ ಆದೇಶ ನೀಡಿದ್ದಾರೆ.