ಸಿಂಗಸಂದ್ರದ ನಿವಾಸಿ ಶಿವಕುಮಾರ್, ವಜ್ರಮುನಿಯವರ ಪತ್ನಿಯ ತಮ್ಮ. ಬಾಷ್ ಕಂಪನಿಯಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. 2 ವರ್ಷಗಳ ಹಿಂದೆ ಅವರಿಗೆ, ಕಟ್ಟಡಗಳ ಒಳವಿನ್ಯಾಸ ಕೆಲಸ ಮಾಡುವ ಸತ್ಯವೇಲಾಚಾರಿ ಪರಿಚಯವಾಗಿತ್ತು. ಇತ್ತೀಚೆಗೆ ಮನೆಯೊಂದನ್ನು ಮಾರಾಟ ಮಾಡಿದ್ದ ಶಿವಕುಮಾರ್, ಅದರಿಂದ ಬಂದ ಹಣವನ್ನು ಬ್ಯಾಂಕ್ನಲ್ಲಿ ಇಟ್ಟಿದ್ದರು. ಅದನ್ನು ತಿಳಿದಿದ್ದ ಆರೋಪಿ, ತನ್ನ ಸ್ನೇಹಿತರ ಜತೆ ಸೇರಿಕೊಂಡು ಈ ಕೃತ್ಯ ಎಸಗಿದ್ದಾನೆ.