ರೋಹಿಣಿ ಸಿಂಧೂರಿ ವರ್ಗಾವಣೆ: ಸರ್ಕಾರಿ ಆದೇಶ ಎತ್ತಿ ಹಿಡಿದ ಸಿಎಟಿ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ ಎತ್ತಿ ಹಿಡಿದಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಎತ್ತಿ ಹಿಡಿದಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಸಿಎಟಿ ವಜಾ ಗೊಳಿಸಿದೆ.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್‌.ಪೊನ್ನಣ್ಣ ರಾಜ್ಯ ಸರ್ಕಾರದ ಪರ ವಾದ ಮಂಡನೆ ಮಾಡಿದ್ದು "ರಾಜ್ಯ ಸರ್ಕಾರ ಕಾನೂನುಬದ್ದವಾಗಿ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ." ಎಂದಿದ್ದಾರೆ.
ಜಿಲ್ಲಾಧಿಕಾರಿಗಳ ಪರ ವಾದ ಮಂಡಿಸಿದ್ದ ವಕೀಲರಾದ ಸುಬ್ರಹ್ಮಣ್ಯ ಜೋಯಿಸ್ "ರೋಹಿಣಿ  ಅವರ ವರ್ಗಾವಣೆ ಹಿಂದೆ ಸರ್ಕಾರ ಕುತಂತ್ರ ನಡೆಸಿದೆ. ಇದು ಉದ್ದೇಶಪೂರ್ವಕ ವರ್ಗಾವಣೆ ಆಗಿದೆ" ಎಂಬ ವಾದವನ್ನು ನ್ಯಾಯಮಂಡಳಿ ಮಾನ್ಯ ಮಾಡಲಿಲ್ಲ.
ಹೈಕೋರ್ಟ್ ಗೆ ಮೊರೆ
ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ ಯಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಆದೇಶದ ಪ್ರತಿ ಕೈಸೇರಿದೊಡನೆ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗುತ್ತದೆ. ಏ.19ರಂದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ ಎಂದು ರೋಹಿಣಿ ಪರ ವಕೀಲರಾದ ಸುಬ್ರಹ್ಮಣ್ಯ ಜೋಯಿಸ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com