ಅಂಬೇಡ್ಕರ್ ಅವರ ಸಿದ್ಧಾಂತಗಳ ವಿರುದ್ಧವಿರುವ ಬಿಜೆಪಿ ನಾಯಕರು ಹಾಗೂ ಬಲ ಪಂಥೀಯ ಕಾರ್ಯಕರ್ತರು, ಅಂಬೇಡ್ಕರ್ ಅವರ 127ನೇ ಹುಟ್ಟುಹಬ್ಬದ ದಿನದಂದು ಹೂಗುಚ್ಛಗಳನ್ನು ಸಲ್ಲಿಸಿದ್ದರು. ಬಿಜೆಪಿ ಹಾಗೂ ಬಲಪಂಥೀಯ ಕಾರ್ಯಕರ್ತರು ಪ್ರಚಾರದ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಆದರೆ, ಅವರು ಅಂಬೇಡ್ಕರ್ ಅವರನ್ನು ದ್ವೇಷಿಸುತ್ತಾರೆ ಎಂದು ದಲಿತ ಸಮುದಾಯದ ನಾಯಕ ವಿಜಯ್ ಗುಂಟ್ರಲ್ ಅವರು ಹೇಳಿದ್ದಾರೆ.