ಭದ್ರಾವತಿ: ಅಡುಗೆ ಅನಿಲ ಸಿಲೆಂಡರ್ ಸ್ಪೋಟದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕೂಲಿ ಬ್ಲಾಕ್ ಶೆಡ್ ನಲ್ಲಿ ನಡೆದಿದೆ..ಮೃತ ಮಹಿಳೆಯನ್ನ್ಯುಸರಸ್ವತಿ (35) ಎಂದು ಗುರುತಿಸಲಾಗಿದೆ.ಗಾಯಗೊಂಡಿದ್ದ ಇನ್ನಿಬ್ಬರು ಮಹಿಳೆಯರನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ..ಕಲಾ ಎನ್ನುವವರ ಮನೆಯಲ್ಲಿ ಉಂಟಾಗಿದ್ದ ಸಿಲೆಂಡರ್ ಸೋರಿಕೆಯಿಂದಾಗಿ ಸ್ಪೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ಮನೆಯ ಬಾಗ ಸಂಪೂರ್ನ ಜಖಂ ಆಗಿದೆ..ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಾಸಕರಾದ ಅಪ್ಪಾಜಿಗೌಡ ಸ್ಥಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos