ಅಂತೆಯೇ ರಾಜ್ಯ ಚುನಾವಣಾ ಆಯೋಗ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಹಿತಿ ಚಂದ್ರಶೇಖರ ಕಂಬಾರ, ನಟ ಪುನಿತ್ರಾಜ್ಕುಮಾರ ಹಾಗೂ ನಟಿ ಪ್ರಣಿತಾ ಅವರನ್ನೊಳಗೊಂಡ ದೃಶ್ಯಾವಳಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, "ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ ದೊಡ್ಡ ಮಟ್ಟದ ಹೆಸರನ್ನು ತಂದುಕೊಟ್ಟಿದ್ದಾರೆ. ಹಾಗೂ ನಟ ಪುನೀತ್ರಾಜ್ ಕುಮಾರ್, ನಟಿ ಪ್ರಣಿತಾ ಸಿನೆಮಾ ಕ್ಷೇತ್ರದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದ್ದಾರೆ. ಇವರ ಮಾತುಗಳು ಮತದಾರರಿಗೆ ಸ್ಫೂರ್ತಿಯಾಗಲಿದೆ ಎಂದು ಸಂಜೀವ್ ಕುಮಾರು ಹೇಳಿದರು.