ಮದುವೆ ನಡೆಯುವ ಸ್ಥಳ ಹಾಗೂ ಕುಟುಂಬದ ಹೆಸರು ಮತ್ತು ತಮ್ಮ ಆಗಮನಾಭಿಲಾಷಿಗಳು ಎಂದು ನಮೂದಿಸಿದ್ದಾರೆ. ಇದಲ್ಲದೆ, ಸಂದೇಶವನ್ನೂ ನೀಡಿರುವ ಜೋಡಿಗಳು, ಜೀವ ಉಳಿಸಲು ರಕ್ತದಾನ, ದೇಶ ಕಟ್ಟಲು ಮತದಾನ. ಮತದಾನ ಮಹಾದಾನ, ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಕಾರಣ. ಮತವೆಂಬ ಅಸ್ತ್ರ ಬಳಸಿ, ಪ್ರಾಮಾಣಿಕರನ್ನು ಆರಿಸುವ ಪ್ರಭುದ್ಧರು ನಾವು. ಮದುವೆಗೆ ತಪ್ಪದೇ ಬನ್ನಿ, ಮತದಾನ ಕಡ್ಡಾಯವಾಗಿ ಮಾಡಿ ಎಂದು ಹೇಳಿದ್ದಾರೆ.