"ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾಮಪತ್ರ ಅಂಗೀಕಾರದ ನಿರ್ಣಯವನ್ನು ಗುರುವಾರಕ್ಕೆ ಕಾಯ್ದಿರಿಸಲಾಗಿತ್ತು. ನಾಮಪತ್ರ ಪರಿಶೀಲನೆ ವೇಳೆ ಅಭ್ಯರ್ಥಿ ಹಾಜರಿರಬೇಕೆಂದು ಹೇಳಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಅವರಿಗೆ ಈ ಸಂಬಂಧ ನೋಟೀಸ್ ಜಾರಿಯಾಗಿತ್ತು. ಆದರೆ ಗುರುವಾರ ಸಂಜೆಯೊಳಗೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತರುತ್ತೇನೆಂದು ಹೇಳಿ ತೆರಳಿದ್ದಾರೆ. ಆದರೆ ನಿಯಮಾನುಸಾರ ಅಭ್ಯರ್ಥಿಗೆ ಈ ಬಗೆಯ ಸಮಯ ನೀಡಲು ಆಯೋಗಕ್ಕೆ ಯಾವ ಅವಕಾಶವೂ ಇಲ್ಲ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಲಾಗಿದೆ " ಚುನಾವಣಾಧಿಕಾರಿ ರಾಚಪ್ಪಹೇಳಿದ್ದಾರೆ.