ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರವು ಬೆಂಗಳೂರು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಸರ್ಕಾರಿ ಆದೇಶ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದ ರೋಹಿಣಿ ಅವರಿಗೆ ಅಲ್ಲಿ ಸಹ ಹಿನ್ನಡೆಯಾಗಿದ್ದಿತು. ಆಗ ಅವರು ಹೈಕೋರ್ಟ್ ಮೆಟ್ಟಿಲೇರಿ ತಮ್ಮ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಸಧ್ಯ ಅಲ್ಲಿ ಸಹ ಅವರಿಗೆ ಹಿನ್ನಡೆಯಾಗಿದ್ದು ವರ್ಗಾವಣೆ ಆದೇಶಕ್ಕೆ ತಡೆ ನೀಡದ ಕಾರಣ ರೋಹಿಣಿ ತಾವು ಸರ್ಕಾರ ವರ್ಗಾವಿಸಿದ ಸ್ಥಾನಕ್ಕೆ ತೆರಳಿ ಅಧಿಕಾರ ಸ್ವೀಕರಿಸುವುದು ಅನಿವಾರ್ಯವಾಗಿದೆ.