ಸೇವಾ ಜೇಷ್ಠತೆ ಪಟ್ಟಿ ಇಂದು ಸಲ್ಲಿಸಿ: ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಆದೇಶ

ಸರ್ಕಾರದ ಎಲ್ಲಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ತಮ್ಮ ಸೇವಾ ಜೇಷ್ಠತೆ ಪಟ್ಟಿಯನ್ನು ಇಂದು ಮಧ್ಯಾಹ್ನ 3 ...
ಕೆ, ರತ್ನ ಪ್ರಭಾ
ಕೆ, ರತ್ನ ಪ್ರಭಾ
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ತಮ್ಮ ಸೇವಾ ಜೇಷ್ಠತೆ ಪಟ್ಟಿಯನ್ನು ಇಂದು  ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭ ಸೂಚಿಸಿದ್ದಾರೆ.
ಬಡ್ತಿ ಹಾಗೂ ಹಿಂಬಡ್ತಿ ಕುರಿತ ಎಲ್ಲಾ ಪಟ್ಟಿಗಳನ್ನು ಏಪ್ರಿಲ್ 27ರ ಮಧ್ಯಾಹ್ನ 3 ಗಂಟೆಯೊಳಗೆ ಯಾವುದೇ ಕಾರಣ ನೀಡದೇ ಸಲ್ಲಿಸಬೇಕೆಂದು ಸೂಚಿಸಿದ್ದಾರೆ. 
ಬಿ.ಕೆ.ಪವಿತ್ರ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ತಯಾರಿಸಿದ್ದ ಜ್ಯೇಷ್ಠತಾ ಪಟ್ಟಿಯನ್ನು ಇಲಾಖೆಯು ಇದೇ ಮಾರ್ಚ್‌ 7ರಂದು ಪ್ರಕಟಿಸಿತ್ತು. ಒಂದು ತಿಂಗಳೊಳಗೆ ಎಲ್ಲ ಇಲಾಖೆಗಳ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸಬೇಕು ಎಂದು ತಿಳಿಸಿತ್ತು.  ಜೊತೆಗೆ ಆಂಗ್ಲಭಾಷೆಯಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದ್ದರು. 
ಮೀಸಲಾತಿ ಆಧಾರದಲ್ಲಿ ಸರ್ಕಾರಿ ನೌಕರರಿಗೆ ಸೇವಾ ಹಿರಿತನ ವಿಸ್ತರಿಸುವ ಕಾಯ್ದೆಯನ್ನು ರೂಪಿಸಿರುವ ರಾಜ್ಯ ಸರ್ಕಾರವು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com