ಈ ವೇಳೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಉದ್ದೇಶಿಸಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಮಾಡಬೇಡಿ, ಹಾಗೇನಾದರೂ ಆದರೆ ನಿಮ್ಮ ಜೀವಕ್ಕೇ ಅಪಾಯ ಎಂದು ಮತ್ತೋರ್ವ ಎಚ್ಚರಿಕೆ ನೀಡಿದ್ದಾನೆ. ದುಷ್ಕರ್ಮಿಗಳಿಂದ ಬಸ್ ಅಪಹರಣವಾಗುತ್ತಲೇ ಪ್ರಯಾಣಿಕರು ಭಯಭೀತಗೊಂಡಿದ್ದು, ಕೆಲ ಕಾಲ ಆತಂಕದಲ್ಲೇ ಸಮಯ ದೂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳ ಕಣ್ಣುತಪ್ಪಿಸಿ ಓರ್ವ ಪ್ರಯಾಣಿಕ ಪೊಲೀಸರಿದೆ ವಿಷಯ ಮುಟ್ಟಿಸಿದ್ದು, ವಿಚಾರ ತಿಳಿದ ಕೂಡಲೇ ಸುಮಾರು 30 ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಬಸ್ ಅನ್ನು ಸುತ್ತುವರೆದಿದೆ.