ಕರ್ನಾಟಕ ಎಂದಿಗೂ ಅಖಂಡ, ಕರ್ನಾಟಕ ರಾಜ್ಯವನ್ನು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ ಎಂದು ಪ್ರತ್ಯೇಕವಾಗಿ ಕನಸು ಮನಸ್ಸಿನಲ್ಲಿಯೂ ಊಹಿಸಲು ಸಾಧ್ಯವಿಲ್ಲ. ಉತ್ತ ಕರ್ನಾಟಕ ಅಭಿವೃದ್ಧಿಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನನಗೆ ಒಂದು ವರ್ಷ ಕಾಲಾವಕಾಶ ನೀಡಿ. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ನೀಡುತ್ತೇನೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.