ಇಂದು ಸಂಜೆ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋತಂಬರಿ ಅವರು, ನಿನ್ನೆ ಬೆಂಗಳೂರಿನಲ್ಲಿ ಸಿಎಂ ಕುಮಾರಸ್ವಾಮಿಯವರು ಸಭೆ ನಡೆಸಿ ಅನ್ಯಾಯ ಸರಿಪಡಿಸುವ ಭರವಸೆ ನೀಡಿದ್ದಾರೆ. ನಮ್ಮ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿರುವ ಅವರು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವುದು. ಉಪಲೋಕಾಯುಕ್ತ ಕಚೇರಿ, ಕೃಷ್ಣಾ ಜಲಭಾಗ್ಯ ಕಚೇರಿಯನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದಾರೆ. ಅಲ್ಲದೆ, ಚಾಲ್ತಿ ಸಾಲಗಾರ ರೈತರ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಘೊಷಿಸಿದ್ದಾರೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ನಡೆಸುವ ಭರವಸೆ ನೀಡಿದ್ದಾರೆ. ಹೀಗಾಗಿ ಬಂದ್ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.