ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಆಗಮಿಸಿದ್ದಾಗ ಕುಮಾರಸ್ವಾಮಿಯವರು ಈ ಬಗ್ಗೆ ಸಮಾಲೋಚನೆ ಮಾಡಿದ್ದರು. ಈ ಬಗ್ಗೆ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಕೈಗೊಂಡಿರುವ 10 ಯೋಜನೆಗಳಿಗೆ ಭೂ ವರ್ಗಾವಣೆ ಮಾಡಲು ಒಪ್ಪಿದ್ದೇವೆ. ಜೊತೆಗೆ ತಕ್ಷಣ ಭೂಮಿ ಹಸ್ತಾಂತರಿಸಬೇಕು. ಭೂಮಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯದೆ ಕೂಡಲೇ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.