ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ನಾನಿಗೌಡ ಎಂಬ ಖಾತೆದಾರ ಹೇಳಿಕೊಂಡಿರುವಂತೆ, ತಮ್ಮದು ಕಾರವಾರ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಾವಿಕೊಡ್ಲ ಮತ್ತು ಬೆಲೆಗದ್ದೆ ನಡುವಿನ ಗ್ರಾಮವಾಗಿದ್ದು, ಊರಿಗೆ ಯಾವುದೇ ರೀತಿಯ ರಸ್ತೆ ಸಂಪರ್ಕವಿಲ್ಲ. ಊರಿನ ನಡುವೆ ಇರುವ ಭೂಮಾಲೀಕರು ರಸ್ತೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಭೂಮಿ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ತಮ್ಮ ಗ್ರಾಮಕ್ಕೆ ರಸ್ತೆ ಸಂಪರ್ಕವೇ ಇಲ್ಲದಂತಾಗಿದ್ದು, ದಯಮಾಡಿ ತಮಗೆ ನ್ಯಾಯ ಕೊಡಿಸಿ ಎಂದು ನಾನಿಗೌಡ ಫೇಸ್ ಬುಕ್ ನಲ್ಲಿ ಆಗ್ರಹಿಸಿದ್ದಾರೆ.