ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾನು ಮತ್ತು ನನ್ನ ಕುಟುಂಬ ಸಹೋದರ ಜಿ.ಶಿವಪ್ರಸಾದ್ ಅವರ ನಿಧನ ದುಃಖದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ನಾಳೆಯ ನನ್ನ ಜನ್ಮದಿನದ ಸಂಭ್ರಮವನ್ನು ಆಚರಣೆ ಮಾಡುತ್ತಿಲ್ಲ. ನನ್ನ ಪ್ರೀತಿಯೆ ಬೆಂಬಲಿಗರ ಶುಭಾಶಯಗಳು ಸದಾಕಾಲ ನನ್ನೊಂದಿಗಿರುತ್ತದೆ. ನನ್ನ ಭಾವನೆಗಳು ನಿಮಗೆ ಅರ್ಥವಾಗುತ್ತದೆ ಹಾಗೂ ಅದನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆಂದು ಹೇಳಿಕೊಂಡಿದ್ದಾರೆ.