ಶಿವಮೊಗ್ಗ: ಮ್ಯಾನ್​ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...
ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18)
ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18)
ಶಿವಮೊಗ್ಗ: ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಸೋಮವಾರ ಶಿವಮೊಗ್ಗದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ನಗರದ ನ್ಯೂಮಂಡ್ಲಿಯ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ಅಂಜನಪ್ಪ (37) ಹಾಗೂ ವೆಂಕಟೇಶ್(18) ಎಂದು ಗುರುತಿಸಲಾಗಿದೆ.
15 ಅಡಿ ಆಳವಿದ್ದ ಮ್ಯಾನ್ ಹೋಲ್ ನಲ್ಲಿ ನೀರು ತುಂಬಿಕೊಂಡಿತ್ತು. ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದ ಈ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..
ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ಮೇಲೆತ್ತಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾನ್ ಹೋಲ್ ಕಾಮಗಾರಿಯನ್ನು ಪ್ರಸಾದ್ ಎನ್ನುವವರು ಗುತ್ತಿಗೆ ಪಡೆದಿದ್ದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com