ಶಿವಮೊಗ್ಗ: ಮ್ಯಾನ್​ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...
ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18)
ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18)
Updated on
ಶಿವಮೊಗ್ಗ: ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಸೋಮವಾರ ಶಿವಮೊಗ್ಗದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ನಗರದ ನ್ಯೂಮಂಡ್ಲಿಯ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ಅಂಜನಪ್ಪ (37) ಹಾಗೂ ವೆಂಕಟೇಶ್(18) ಎಂದು ಗುರುತಿಸಲಾಗಿದೆ.
15 ಅಡಿ ಆಳವಿದ್ದ ಮ್ಯಾನ್ ಹೋಲ್ ನಲ್ಲಿ ನೀರು ತುಂಬಿಕೊಂಡಿತ್ತು. ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದ ಈ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..
ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ಮೇಲೆತ್ತಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾನ್ ಹೋಲ್ ಕಾಮಗಾರಿಯನ್ನು ಪ್ರಸಾದ್ ಎನ್ನುವವರು ಗುತ್ತಿಗೆ ಪಡೆದಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com