ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರದಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಾ ರಾಮನಗರದಲ್ಲಿ ನೆಲೆಯೂರಿದ್ದ ಜಮತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ...
Published on
ರಾಮನಗರ: ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಾ ರಾಮನಗರದಲ್ಲಿ ನೆಲೆಯೂರಿದ್ದ ಜಮತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 
ಬಂಧಿತ ಶಂಕಿತ ಉಗ್ರರ 2014ರಲ್ಲಿ ನಡೆದ ಬುರ್ದ್ವಾನ್ ಸ್ಫೋಟ ಹಾಗೂ ಬಿಹಾರ ರಾಜ್ಯದ ಬೋಧ್ ಗಯಾ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದೆ. 
ಬಂಧಿತನನ್ನು ಮುನೀರ್ ಶೇಖ್ (25) ಎಂದು ಗುರ್ತಿಸಲಾಗಿದೆ. ಈತ ರಾಮನಗರದ ತೃಪ್ ಲೇನ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಮುನೀರ್ ಬಂಧನದ ವೇಳೆ ಆತನಿಂದ ಲ್ಯಾಪ್ ಟಾಪ್, ಜಿಲೇಟಿನ್ ಪುಡಿ, ಪ್ರವಾಸಿ ತಾಣ, ದೇಗುಲ, ಮಸೀದಿಗಳ ಮ್ಯಾಪ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com