ಆ.07 ರಂದು ಸಂಜೆ 6 ರಿಂದ ಕಾಡುವ ಕಿರಂ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕಿರಂ ಪುರಸ್ಕಾರ, ಗಾಯನ, ಪುಸ್ತಕ ಬಿಡುಗಡೆ, ಕಾವ್ಯವಾಚನ ಕಾರ್ಯಕ್ರಮಗಳು ನಡೆಯಲಿವೆ. ಅಹೋರಾತ್ರಿ ನಡೆಯುವ ಈ ಅಪರೂಪದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾಹಿತ್ಯಾಸಕ್ತತು, ಕಾವ್ಯ ವಾಚಕರು ಆಗಮಿಸಲಿದ್ದಾರೆ. ಕನ್ನಡ ಸಾರಸ್ವತ ಲೋಕದ ಹಿರಿಯ ವಿಮರ್ಶಕ, ಚಿಂತಕ ಕಿರಂ ಎಂದೇ ಖ್ಯಾತರಾಗಿದ್ದ ಪ್ರೊ.ಕಿತ್ತಾನೆ ರಂಗಣ್ಣ ನಾಗರಾಜ್ ಅವರ 8 ನೇ ಪುಣ್ಯಸ್ಮರಣೆಯ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.