ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದು, ಬೆಂಗಳೂರಿನಲ್ಲಿ ನಡೆಯಬೇಕಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸ್ಥಳಾಂತರ ಯತ್ನ, ನಗರದ ಹೆಚ್ಎಎಲ್'ನಿಂದ ರಫೇಲ್ ಯುದ್ಧ ವಿಮಾನ ಒಪ್ಪಂದ ಕಸಿದುಕೊಂಡು ಉದ್ಯಮಿಗೆ ನೀಡಿದ್ದು, ಸಿಆರ್'ಪಿಎಫ್ ಕೇಂದ್ರವನ್ನು ಉತ್ತರಪ್ರದೇಶಕ್ಕೆ ನೀಡಿದ್ದು ಸೇರಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಮಾಡಿದ್ದಾರೆಂದು ಆರೋಪಿಸಿದ್ದಾರೆ.