ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾಳಪ್ಪನಹಟ್ಟಿಯವರಾದ ತಿಪ್ಪೇಸ್ವಾಮಿ ಮೂರು ಬಾರಿ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಜನತಾ ದಳ ಹಾಗೂ ಜೆಡಿಎಸ್ ನೊಡನೆ ಗುರುತಿಸಿಕೊಂಡಿದ್ದ ಇವರು ದೇವೇಗೌಡ, ಜೆ.ಎಚ್. ಪಟೇಲ್ ಮುಖ್ಯಮಂತ್ರಿಗಳಾಗಿದ್ದ ವೇಳೆ ಸಚಿವರಾಗಿದ್ದರು. ಇದಾದ ಬಳಿಕ ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ್ದ ತಿಪ್ಪೇಸ್ವಾಮಿ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.