ಬೆಂಗಳೂರು: ಮಾಜಿ ಸಿಎಂ ಕರುಣಾನಿಧಿಗೆ ಗೌರವಾರ್ಥ, ಕೆಂಪೇಗೌಡ ಜಯಂತಿ ಮುಂದಕ್ಕೆ!
ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ...
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಬುಧವಾರಕ್ಕೆ ನಿಗದಿಯಾಗಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ. ಇನ್ನು ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ ನಡೆಯಲಿದೆ ಎಂದು ಹೇಳಿದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದರು. ಇಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಯಲಿದೆ.