ನಗರದ ಶಾಂತಿನಗರ ಮತ್ತು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಸಂಜೆ ತಮಿಳುನಾಡಿಗೆ ತೆರಳಲು ಬಂದಿದ್ದ ಪ್ರಯಾಣಿಕರು ಬಸ್ ಸಿಗದೆ ಪರದಾಡುವಂತಾಗಿತ್ತು. ಕೋರಮಂಗಲ, ಸಿಲ್ಕ್'ಬೋರ್ಡ್, ಹೆಬ್ಬಗೋಡಿ, ಆನೇಕಲ್ ಗಡಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡ ವಿಚಾರ ತಿಳಿದು ನಿರಾಸೆಗೊಂಡರು.