ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ನಮ್ಮಲ್ಲಿ ಮಾತ್ರವಲ್ಲ ದೇಶದ ಎಲ್ಲೆಡೆಗಳಲ್ಲಿ ಇಂತಹಾ ಸಮಸ್ಯೆಗಳು ಉದ್ಭವವಾಗುತ್ತದೆ. ಈ ವಿಷಯವನ್ನು ಸ್ಥಳೀಯ ಜನಪ್ರತಿನಿಧಿಗಳು, ಮತ್ತು ಅಧಿಕಾರಿಗಳು ನಿರ್ವಹಿಸಬೇಕು. ಅಂತಹ ಸೂಕ್ಷ್ಮ ವಿಷಯಗಳ ಕುರಿತು ಸರ್ಕಾರವನ್ನು ಒತ್ತಾಯಿಸಬಾರದು.ಎಂದು ಸಚಿವರು ಹೇಳಿದ್ದಾರೆ. ಖಾದರ್ ಬುಧವಾರ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಅವರು ವಿವಾದ ಬಗೆಹರಿಸಲು ಮಧ್ಯಸ್ಥಿಕೆದಾರರ ಅಗತ್ಯವನ್ನು ಒಪ್ಪಿಕೊಂಡಿದ್ದಾರೆ.