ಎರೆಡು ಗಂಟೆ ಭತ್ತ ನಾಟಿ: ಬಂಗಾರದ ಮನುಷ್ಯ ಚಿತ್ರ ರಾಜೀವಪ್ಪನ ಪಾತ್ರದ ಮಾದರಿಯಲ್ಲೇ ರೈತರೊಂದಿಗೆ ಸೇರಿಕೊಂಡು ಮಣ್ಣಿನ ಮಗನಾಗಿ ಗದ್ದೆ ಇಳಿದು ನಾಟಿ ಮಾಡಲಿದ್ದಾರೆ. ಸಿಎಂ ಆ ದಿನದ ಉಡುಪೂ ಕೂಡ ಬದಲಾಗಲಿದೆ ಆಗಲಿದೆ. ಮಂಡ್ಯ ಚೆಡ್ಡಿ, ಬಣ್ಣ ಬಣ್ಣದ ಲುಂಗಿ, ಬಿಳಿ ಬನಿಯನ್, ತಲೆಗೊಂದು ಟವಲ್ ಹಾಕಿಕೊಂಡು ಗೆದ್ದ ಕೆಲಸ ಮಾಡಲಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ರೈತರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಭತ್ತ ನಾಟಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆಂದು ಸಚಿವ ಸಿ,ಎಸ್ ಪುಟ್ಟರಾಜು ವಿವರಿಸಿದರು.