ಕಪಿಲಾ ಜಲಾನಯನ ವ್ಯಾಪ್ತಿಯಲ್ಲಿ ಬರಬಹುದಾದ ಹಳ್ಳದಕೆರೆ, ತೋಪನಕೆರೆ, ಸರಸ್ವತಿ ಕಾಲೋನಿ, ವಕ್ಕಲಗೆರೆ, ಶಂಕರಪುರ ಇನ್ನೂ ಮೊದಲಾದೆಡೆಗಳಲ್ಲಿ ಮುಳುಗಡೆಯ ಭೀತಿ ಎದುರಾಗಿದೆ.ಈ ಪ್ರದೇಶದ ಜನಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಕಪಿಲಾ ನದಿ ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಇದರಿಂದ ಸುತ್ತಮುತ್ತ ಊರುಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.