ಹುಬ್ಬಳ್ಳಿಯ ವಿದ್ಯಾನಗರದ ತಿಮ್ಮಸಾಗರದಲ್ಲಿ ಐದು ಎಕರೆ ಹದಿನೈದು ಗುಂಟೆ ಜಾಗದಲ್ಲಿ ವಿಶೇಷವಾಗಿ ನಿರ್ಮಾಣ ಮಾಡಲಾಗಿರುವ ಕಟ್ಟಡವನ್ನು ಇಂದು ಬೆಳಗ್ಗೆ 11 ಗಂಟೆಗೆ ಸಿಜೆಐ ದೀಪಕ್ ಮಿಶ್ರಾ ಅವರು ಲೋಕಾರ್ಪಣೆ ಮಾಡಿದರು. ಈ ವೇಳೆ ಸಿಎಂ ಕುಮಾರಸ್ವಾಮಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಮೋಹನ್ ಎಂ ಶಾಂತನಗೌಡರ್, ಜಸ್ಚಿಸ್ ಅಬ್ದುಲ್ ನಜೀರ್, ಹೈಕೋರ್ಟ್ ಜಡ್ಜ್ ಗಳಾದ ರವಿ ಮಳಿಮಠ, ಜಸ್ಟಿಸ್ ಬೂದಿಹಾಳ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು ಉಪಸ್ಥಿತರಿದ್ದರು.