ಸುಪ್ರೀಂ ಕೋರ್ಟ್ ನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿರುವ ಕಾರಣ, ಎಲ್ಲ ವಾಹನ ಸವಾರರು ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆಯ ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಿಂದ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಅಂತೆಯೇ ವಿಮೆ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಬೇಕು ಎಂದು ಸರ್ಕಾರ ಪೊಲೀಸ್ ಇಲಾಖೆಗೆ ಸೂಚಿಸಿದೆ ಎನ್ನಲಾಗಿದೆ.