ಈಗಾಗಲೇ ಭಾರಿ ಮಳೆಯಿಂದಾಗಿ ಕಾವೇರಿ ತೀರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯ ತುಂಬಿ ತುಳುಕುತ್ತಿದೆ. ಅಧಿಕಾರಿಗಳು ಈಗಾಗಲೇ ಪ್ರವಾಹ ಎಚ್ಚರಿಕೆ ನೀಡಿದ್ದು, ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ.