ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಬಂಧಿಸಿರುವ ನಾಲ್ವರು ಆರೋಪಿಗಳಾದ ಅಮೋಲ್ ಕಾಳೆ, ಹಿಂದೂ ಜನಜಾಗೃತಿ ಸಮಿತಿ ಮಾಜಿ ಸಂಚಾಲಕ ಸುಜೀತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ ಮಾಜಿ ಕಾರ್ಯಕರ್ತ ರಾಜೇಶ್ ಬಂಗೆರಾ, ಹಾಗೂ ಭರತ್ ಕುರ್ನೆ ಅವರು 22 ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿದ್ದಾರೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.