ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ ಮಾಡಲಾಗುತ್ತಿರುವ ವಿಷಯ ಈ ಸಭೆಯಲ್ಲಿ ಬಹಿರಂಗವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಶಾಲಿನಿ ರಜನೀಶ್ ಸಭೆಯಲ್ಲಿ ಶೂ ವಿತರಣೆ ಯೋಜನೆಯ ಬಗ್ಗೆ ವಿವರಣೆ ನೀಡಿದ್ದು, ಆ.15 ರ ವೇಳೆಗೆ ಎಲ್ಲಾ ಶಾಲೆಗಳಿಗೂ ಶೂಗಳನ್ನು ತಲುಪಿಸಲಾಗುವುದು ಎಂದು ಹೇಳುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಸಚಿವರು ಶೂಗಳ ಗುಣಮಟ್ಟ ಉತ್ತಮವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.