ಕೆಲವೆಡೆ ಉಂಟಾಗಿರುವ ಅತಿಯಾದ ಮಳೆಯಿಂದಾಗಿ ಸೇತುವೆಗಳು ಹಾಳಾಗಿದ್ದು, 451 ಸಂಪರ್ಕ ಸೇತುವೆ ನಿರ್ಮಿಸಲಾಗುವುದು, ಕೆಲವು ಭಾಗಗಳಲ್ಲಿ ಮಳೆ ಉತ್ತಮವಾಗಿದ್ದರೂ 13 ಜಿಲ್ಲೆಗಳಲ್ಲಿ ಬರಗಾಲ ಇದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ರೈತರ ಸಾಲ ಮನ್ನಾ ಬಗ್ಗೆಯೂ ಮಾತನಾಡಿರುವ ಅವರು, 49 ಸಾವಿರ ಕೋಟಿ ಸಾಲ ಮನ್ನಾಗೆ ನಿರ್ಧಾರ ಮಾಡಲಾಗಿದೆ, ಇದರಿಂದಾಗಿ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ತೆಗೆದುಕೊಂಡಿರುವ 22 ಲಕ್ಷ ರೈತರಿಗೆ ಅನುಕೂಲವಾಗಿದ್ದು, ವಾಣಿಜ್ಯ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾಗೆ ಶೀಘ್ರವೇ ಆದೇಶ ನೀಡಲಾಗುವುದು ಎಂದು ಹೇಳಿದ್ದಾರೆ.