ಪ್ರಮುಖವಾಗಿ ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಕಾವೇರಿ, ಕಪಿಲ ನದಿಗಳು ತುಂಬಿ ಹರಿಯುತ್ತಿವೆ. ಶ್ರೀರಂಗ ಪಟ್ಟಣ, ನಿಮಿಷಾಂಬ ದೇಗುಲ, ನಂಜನಗೂಡಿನಲ್ಲೂ ನದಿ ಉಕ್ಕಿ ಹರಿದಿದೆ. ಇನ್ನು ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದಿಂದ ಗೇಟ್ ತೆರೆದು ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಕಪಿಲ ಮತ್ತು ಕಾವೇರಿ ನದಿ ಪ್ರವಾಹದಿಂದಾಗಿ ಅಪಾರ ಪ್ರಮಾಣದ ನೀರು ಡ್ಯಾಂಗಳಿಗೆ ಹರಿದು ಬರುತ್ತಿದ್ದು, 94 ಸಾವಿರ ಕ್ಯೂಸೆಕ್ಸ್ ನೀರನ್ನು ಡ್ಯಾಂ ನಿಂದ ಹೊರಗೆ ಬಿಡಲಾಗಿದೆ. ಸಾಗರ ತಾಲೂಕಿನ ಕರಗಾಲ್ ಗ್ರಾಮದಲ್ಲಿರುವ ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಯ ಬಿಡಲಾಗಿದ್ದು, ನಾಲ್ಕು ವರ್ಷಗಳಲ್ಲಿ ಇದೇ ಮೊದಲು. 1964ರಿಂದ ಈ ವರೆಗೂ ಡ್ಯಾಂನ ಗೇಟ್ ಗಳನ್ನು ಒಟ್ಟು 14 ಬಾರಿ ತೆರೆದು ನೀರು ಬಿಡಲಾಗಿದೆ.