ಶಿವಮೊಗ್ಗ : ಕಳೆದೊಂದು ವಾರದಿಂದ ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು ಜನರು ನಿದ್ದೆಯಿಲ್ಲದೆ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. ಜನರು ಮನೆಗೆ ನುಗ್ಗಿದ ನೀರನ್ನು ಹೊರಹಾಕುವಲ್ಲಿ ನಿರತರಾಗಿದ್ದ ದೃಶ್ಯಗಳು ಸರ್ವೇಸಾಮನ್ಯ ಎಂಬಂತೆ ಕಂಡುಬರುತ್ತಿದೆ.
ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಕಳೆದೆ ನಾಲ್ಕು ವರ್ಷಗಳಿಂದಲೂ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ.ಈ ಮಧ್ಯೆ ತುಂಗಾ, ಭದ್ರಾ, ಮತ್ತು ಶರಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು. ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಲಿಂಗನಮಕ್ಕಿ ಜಲಾಯಶಕ್ಕೆ 36 ಸಾವಿರದ 045 ಕ್ಯೂಸೆಕ್ಸ್ ಒಳ ಹರಿವಿದ್ದು, 1772.89 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು 11,483 ಕ್ಯೂಸೆಕ್ಸ್ ನಷ್ಟಿದ್ದು, 155.10 ಅಡಿಗಳಷ್ಟು ನೀರು ಸಂಗ್ರವಾಗಿದೆ. ಜಲಾಶಯದ ಒಟ್ಟು ಸಂಗ್ರಹದ ಮಟ್ಟ 186 ಅಡಿಗಳಷ್ಟಾಗಿದೆ.
Advertisement