ಹರದನಹಳ್ಳಿ: ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರೈತರು ವಾಣಿಜ್ಯ ಬ್ಯಾಂಕುಗಳಲ್ಲಿ ತೆಗೆದುಕೊಂಡಿರುವ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಣಕಾಸು ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ಬ್ಯಾಂಕ್ ಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ರೈತರಿಗಾಗಿ ಹೊಸ ಯೋಜನೆ , ಕಾರ್ಯಕ್ರಮ ಜಾರಿಗೊಳಿಸುವ ಗುರಿ ಹೊಂದಲಾಗಿದ್ದು, ತಿಂಗಳಲ್ಲಿ ಒಂದು ದಿನ ರೈತರೊಂದಿಗಿದ್ದು, ಅವರಲ್ಲಿ ಆತ್ಮಸ್ಱೈರ್ಯ ಮೂಡಿಸಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದಂತೆ ಶೂನ್ಯ ಬಜೆಟ್ ಕೃಷಿ ಪದ್ದತಿ ಪರಿಚಯಿಸಲು ಅಜಿಂ ಪೌಂಡೇಷನ್ ಮುಖ್ಯಸ್ಥ ಅಜಿಂ ಪ್ರೇಮ್ ಜಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು
Advertisement