ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸಾ.ರಾ. ಮಹೇಶ್ ಅವರು, ಸ್ವಾತಂತ್ರ್ಯೋತ್ಸವ ಮತ್ತು ಮರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ಮಾರಾಟ ಮಾಡುವುದಾಗಿ ಘೋಷಣೆ ಮಾಡಿದ್ದು ನಿಜ. ಆದರೆ, ದಿನಾಂಕವನ್ನು ಪ್ರಕಟಿಸಿರಲಿಲ್ಲ. ಮಹಿಳೆಯರು ತಪ್ಪಾಗಿ ಅರ್ಥೈಸಿಕೊಂಡು ಕೆಎಸ್ಐಸಿ ಕೇಂದ್ರದ ಬಳಿಗೆ ಹೋಗಿದ್ದಾರೆ. ಪ್ರಸ್ತುತ ಕೆಎಸ್ಐಸಿ ರಿಯಾಯಿತಿ ದರದಲ್ಲಿಯೇ ಸೀರೆಗಳನ್ನು ಮಾರಾಟ ಮಾಡುತ್ತಿದೆ. ಆದರೂ ಚುನಾವಮೆ ನೀತಿ ಸಂಹಿತೆ ಅಡ್ಡ ಬರುತ್ತದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಿದ್ದೆವು. ಸ್ವಾತಂತ್ರ್ಯ ದಿನದ ಅಂಗವಾಗಿ ಆ.20ರಂದು ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಆ.21 ರಂದು ರಿಯಾಯಿತಿ ದರದಲ್ಲಿ ಸೀರೆ ಮಾರಾಟವಿದ್ದು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಧಿಕೃತವಾಗಿ ಉದ್ಘಾಟನೆ ಮಾಡಲಿದ್ದಾರೆ. ಅಲ್ಲಿಯವರೆಗೂ ಸಾರ್ವಜನಿಕರು ಕಾಯಬೇಕು. ರೂ.7 ರಿಂದ 9 ಸಾವಿರ ಮೊತ್ತದ ಸೀರೆಯನ್ನು ಕೇವಲ ರೂ.4,500ಕ್ಕೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.