ರಕ್ಷಣಾ ಕಾರ್ಯಾಚರಣೆಗೂ ಮುನ್ನ ರೈಲ್ವೇ ವಿಭಾಗೀಯ ನಿರ್ವಾಹಕರು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಬಳಿ ಮನವಿ ಮಾಡಿಕೊಂಡಿದ್ದರು. ನಿಲ್ದಾಣದಿಂದ ಸಿಬ್ಬಂದಿಗಳನ್ನು ರಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡುವಂತೆ ತಿಳಿಸಿದ್ದರು. ಆದರೆ, ಹೆಲಿಕಾಪ್ಟರ್ ಕಾರ್ಯಾಚರಣೆ ಸಾಧ್ಯವಾಗದ ಹಿನ್ನಲೆಯಲ್ಲಿ ಟ್ರಕ್ಕಿಂಗ್ ಮಾರ್ಗದ ಮೂಲಕ ತೆರಳಿ ಸಿಬ್ಬಂದಿ ರಕ್ಷಣೆ ಮಾಡಲಾಯಿತು.